ಉಡುಪಿ: ಬಿಜೆಪಿ, ಜೆಡಿಎಸ್ ಧರ್ಮದ ಮೇಲೆ ರಾಜಕಾರಣ ಮಾಡುತ್ತಾರೆ – ಡಿಸಿಎಂ ಡಿ.ಕೆ. ಶಿವಕುಮಾರ್

ಉಡುಪಿ, ಆಗಸ್ಟ್ 30, 2025: ಬಿಜೆಪಿ, ಜೆಡಿಎಸ್ ಧರ್ಮದ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕೆ. ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ, ಪ್ರಾರ್ಥನೆ ನನ್ನ ಸಹಜ ಶೈಲಿ ಎಂದರು.

ಉಡುಪಿ: ಬಿಜೆಪಿ, ಜೆಡಿಎಸ್ ಧರ್ಮದ ಮೇಲೆ ರಾಜಕಾರಣ ಮಾಡುತ್ತಾರೆ – ಡಿಸಿಎಂ ಡಿ.ಕೆ. ಶಿವಕುಮಾರ್

ಉಡುಪಿ, ಆಗಸ್ಟ್ 30, 2025: “ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ಗಮನ ಕೊಡದೆ, ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೀಕಿಸಿದರು. ಶನಿವಾರ ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶದ ಕುರಿತು ಕೇಳಿದಾಗ ಈ ಹೇಳಿಕೆ ನೀಡಿದರು.

ಕೃಷ್ಣನ ಆಶೀರ್ವಾದ ಪಡೆಯಲು ಬಂದಿರುವಿರಾ ಎಂಬ ಪ್ರಶ್ನೆಗೆ, “ಕೃಷ್ಣ, ಗಣಪತಿ ಮತ್ತು ನಿಮ್ಮ (ಮಾಧ್ಯಮಗಳ) ಆಶೀರ್ವಾದವೂ ಬೇಕು. ಎಲ್ಲರ ಆಶೀರ್ವಾದ ಅಗತ್ಯ” ಎಂದು ಚಟಾಕಿಯಿಂದ ಉತ್ತರಿಸಿದರು. ಸೆಪ್ಟೆಂಬರ್ ಕ್ರಾಂತಿ ಚರ್ಚೆಯ ಸಂದರ್ಭದಲ್ಲಿ ಪ್ರಾರ್ಥನೆಗೆ ಇದು ಸೂಕ್ತ ಕಾಲವೇ ಎಂದು ಕೇಳಿದಾಗ, “ಅದೆಲ್ಲ ಏನಿಲ್ಲ. ಪ್ರಾರ್ಥನೆ ನನ್ನ ಸಹಜ ಶೈಲಿ. ಉಡುಪಿಯ ಕೃಷ್ಣಮಠದಿಂದ ಈ ಹಿಂದೆಯೂ ಆಹ್ವಾನ ಇತ್ತು. ನಮ್ಮ ಸರ್ಕಾರ ಬಂದ ಬಳಿಕವೂ ಆಹ್ವಾನಿಸಿದ್ದರು. ಆಗ ಬರಲಾಗಿರಲಿಲ್ಲ, ಈಗ ಬಂದಿದ್ದೇನೆ” ಎಂದು ತಿಳಿಸಿದರು.

ಈ ಲೇಖನವನ್ನು ಹಂಚಿಕೊಳ್ಳಿ