ಮೊದಲು ಜನಗಣತಿ ಆಗಲಿ, ನಂತರ ಕ್ಷೇತ್ರ ಮರುವಿಂಗಡಣೆ ನಡೆಯಲಿ: ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಹೊಸ ಜನಗಣತಿ ಬಳಿಕವೇ ಕ್ಷೇತ್ರ ಮರುವಿಂಗಡಣೆ ಮಾಡಬೇಕು, ಇಲ್ಲದಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಮಹಿಳಾ ಮೀಸಲಾತಿಯನ್ನು 2023ರ ಮಸೂದೆಯಂತೆಯೇ ತಕ್ಷಣ ಜಾರಿಗೊಳಿಸಲು ಅವರು ಒತ್ತಾಯಿಸಿದ್ದಾರೆ.
