ಕಾಪು

ಕಾಪು: ಕೊಪ್ಪಲಂಗಡಿ ಬಳಿ ಕಾರು ಢಿಕ್ಕಿ; ರಸ್ತೆ ದಾಟಲು ನಿಂತಿದ್ದ ಪಾದಚಾರಿ ಮೃತ್ಯು

ಕಾಪು, ಆಗಸ್ಟ್ 24, 2025: ಕೊಪ್ಪಲಂಗಡಿ NH66ರಲ್ಲಿ ಕಾರು ಢಿಕ್ಕಿ; ಪಾದಚಾರಿ ಪೀರು ಸಾಹೇಬ್ (70) ಮೃತ್ಯು. ಗಂಭೀರ ಗಾಯದಿಂದ ಆಸ್ಪತ್ರೆಗೆ ಸಾಗಿಸುವಾಗ ಸಾವು. ಕಾಪು ಪೊಲೀಸ್ ತನಿಖೆ.

ಕಾಪು: ಕೊಪ್ಪಲಂಗಡಿ ಬಳಿ ಕಾರು ಢಿಕ್ಕಿ; ರಸ್ತೆ ದಾಟಲು ನಿಂತಿದ್ದ ಪಾದಚಾರಿ ಮೃತ್ಯು

ಕಾಪು, ಆಗಸ್ಟ್ 24, 2025: ಕಾಪು ಸಮೀಪದ ಕೊಪ್ಪಲಂಗಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ (ಆಗಸ್ಟ್ 24, 2025) ಮಧ್ಯಾಹ್ನ 3:30ರ ಸುಮಾರಿಗೆ ಕಾರೊಂದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆದ ಪರಿಣಾಮ ಆ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕೊಪ್ಪಲಂಗಡಿಯ ಪೀರು ಸಾಹೇಬ್ (70) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಕಾರು ಅತೀವೇಗದಿಂದ ಬಂದು ರಸ್ತೆ ದಾಟಲು ನಿಂತಿದ್ದ ಪೀರು ಸಾಹೇಬ್‌ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಉಡುಪಿ ಎಸ್‌ಡಿಪಿಐ ಆಂಬ್ಯುಲೆನ್ಸ್ ಮೃತರನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿತು.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ