ಮಣಿಪಾಲ: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಶಾಲಾ ಬಸ್; 7 ವಿದ್ಯಾರ್ಥಿಗಳಿಗೆ ಗಾಯ
ಮಣಿಪಾಲದ ಸರಳಬೆಟ್ಟು ಕೊಡಂಗೆ ಬಳಿ ಶುಕ್ರವಾರ ಬೆಳಿಗ್ಗೆ ಕ್ರೈಸ್ಟ್ ಶಾಲೆಯ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 7 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಸ್ಥಳೀಯರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

