ಮುಂಡಗೋಡ: ಹೋಟೆಲ್ನಲ್ಲಿ ವ್ಯಕ್ತಿಯ ಭೀಕರ ಹತ್ಯೆ; ಹಳೆಯ ಅಪಹರಣ ಪ್ರಕರಣದ ಬೆನ್ನಲ್ಲೇ ನಡೆದ ಕೃತ್ಯ
ಮುಂಡಗೋಡಿನ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಜಮೀರ್ ಅಹ್ಮದ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹಿಂದೆ ಅಪಹರಣಕ್ಕೆ ಒಳಗಾಗಿದ್ದ ಇವರ ಮೇಲೆ ಈಗ ಮಾರಣಾಂತಿಕ ದಾಳಿ ನಡೆದಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ.

