ಕೋಟ, ಆಗಸ್ಟ್ 24, 2025: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸಾಸ್ತಾನ ಟೋಲ್ ಗೇಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 12 ಪ್ರಯಾಣಿಕರು ಗಾಯಗೊಂಡ ಘಟನೆ ಆಗಸ್ಟ್ 24, 2025ರ ಮುಂಜಾನೆ 4:45ರ ಸುಮಾರಿಗೆ ನಡೆದಿದೆ.

ಇಳಕಲ್ನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಟೋಲ್ ಗೇಟ್ ಕಂಬಕ್ಕೆ ಢಿಕ್ಕಿಯಾಗಿದೆ. ಬಸ್ನಲ್ಲಿ ಒಟ್ಟು 36 ಪ್ರಯಾಣಿಕರಿದ್ದು, ಇವರಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಒಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ ಎಂದು ಮಾಹಿತಿ ದೊರೆತಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.