ಉಡುಪಿ: ನೇಜಾರಿನಲ್ಲಿ ಕಾರು ಡಿಕ್ಕಿ; ರಸ್ತೆ ದಾಟುತ್ತಿದ್ದ 6ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ದುರ್ಮರಣ
ಉಡುಪಿಯ ನೇಜಾರಿನ ಜ್ಯೋತಿನಗರದಲ್ಲಿ ರಸ್ತೆ ದಾಟುತ್ತಿದ್ದ 12 ವರ್ಷದ ಶಾಲಾ ಬಾಲಕ ಅಬ್ದುಲ್ ರೆಹಮಾನ್ ಎಂಬಾತನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಮೃತ ಬಾಲಕ ಸಲಿಹಾತ್ ಶಾಲೆಯ 6ನೇ ತರಗತಿ ವಿದ್ಯಾರ್ಥಿಯಾಗಿದ್ದನು.

