ಉಡುಪಿ: ಹೆಚ್ಚುತ್ತಿರುವ ಬಿಸಿಲ ಬೇಗೆ; ಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚನೆ
ಉಡುಪಿ ಜಿಲ್ಲೆಯಲ್ಲಿ ಉಷ್ಣಾಂಶ ಹೆಚ್ಚುತ್ತಿರುವ ಕಾರಣ ಜನರು ಮುನ್ನೆಚ್ಚರಿಕೆ ವಹಿಸುವಂತೆ ಡಿಸಿ ಸ್ವರೂಪಾ ಟಿ.ಕೆ ಸೂಚಿಸಿದ್ದಾರೆ. ಕುಡಿಯುವ ನೀರಿನ ಪೂರೈಕೆ, ಅಗ್ನಿ ಸುರಕ್ಷತೆ ಆಡಿಟ್ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಓಆರ್ಎಸ್ ದಾಸ್ತಾನು ಕಡ್ಡಾಯಗೊಳಿಸಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

