ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ ಮೂರನೇ ಬಾರಿಗೆ ಹುಸಿ ಬಾಂಬ್‌ ಬೆದರಿಕೆ ಇಮೇಲ್; ತನಿಖೆಗೆ ವಕೀಲರ ಸಂಘದ ಆಗ್ರಹ

ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣಕ್ಕೆ ಜೂನ್ 29 ರಂದು ಮೂರನೇ ಬಾರಿಗೆ ಅನಾಮಧೇಯ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ತಪಾಸಣೆಯ ಬಳಿಕ ಇದು ಹುಸಿ ಕರೆ ಎಂದು ತಿಳಿದುಬಂದಿದೆ. ಸೂಕ್ತ ತನಿಖೆ ಹಾಗೂ ಭದ್ರತೆಗೆ ಆಗ್ರಹಿಸಿ ವಕೀಲರ ಸಂಘವು ಎಎಸ್ಪಿ ಸುಧಾಕರ ನಾಯ್ಕ್ ಅವರಿಗೆ ಮನವಿ ಸಲ್ಲಿಸಿದೆ.