ಬೆಳ್ತಂಗಡಿ

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ಎರಡು ಗಂಟೆಗಳ ಪೊಲೀಸ್ ಕಸ್ಟಡಿಗೆ

ಉಡುಪಿ, ಆಗಸ್ಟ್ 23, 2025: ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಎರಡು ಗಂಟೆಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಉಡುಪಿ ಕೋರ್ಟ್. ಮಧ್ಯಾಹ್ನ 3:40ಕ್ಕೆ ಮತ್ತೆ ಹಾಜರಾತಿ.

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ಎರಡು ಗಂಟೆಗಳ ಪೊಲೀಸ್ ಕಸ್ಟಡಿಗೆ

ಉಡುಪಿ, ಆಗಸ್ಟ್ 23, 2025: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಂಧಿತರಾದ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶಿಸಿದೆ.

ಬ್ರಹ್ಮಾವರ ಪೊಲೀಸರು ತಿಮರೋಡಿಯವರನ್ನು ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಸಿದ್ದರಿಂದ, ನ್ಯಾಯಾಧೀಶ ನಾಗೇಶ್ ಒಂದು ಗಂಟೆಯೊಳಗೆ ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸುವಂತೆ ಸೂಚಿಸಿದರು. ಅದರಂತೆ, ಹಿರಿಯಡ್ಕ ಜೈಲಿನಲ್ಲಿದ್ದ ತಿಮರೋಡಿಯವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಮಧ್ಯಾಹ್ನ 1:30ಕ್ಕೆ ಕೋರ್ಟಿಗೆ ಕರೆತರಲಾಯಿತು.

ನ್ಯಾಯಾಧೀಶರು ತಿಮರೋಡಿಯವರನ್ನು ವಿಚಾರಣೆಗಾಗಿ ಎರಡು ಗಂಟೆಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಮಧ್ಯಾಹ್ನ 3:40ಕ್ಕೆ ಮತ್ತೆ ಕೋರ್ಟಿಗೆ ಹಾಜರುಪಡಿಸುವಂತೆ ಆದೇಶಿಸಿದರು. ಪೊಲೀಸರು ತಿಮರೋಡಿಯವರನ್ನು ಕಸ್ಟಡಿಗೆ ಪಡೆದು ವಿಚಾರಣೆಗಾಗಿ ಕರೆದೊಯ್ದರು.

ಈ ಲೇಖನವನ್ನು ಹಂಚಿಕೊಳ್ಳಿ